newsics.com
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲ ಕೆ.ಸುಮನ್ (64) ಗುರುವಾರ ನಿಧನರಾದರು.
ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮನ್ ಗುರುವಾರ ಕೊನೆಯುಸಿರೆಳೆದರು.
ಕೆ.ಸುಮನ್ ಅವರು ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲರಾಗಿದ್ದರು. ಮಂತ್ರಾಲಯ ಮಠದ ಪರವಾಗಿ ವೃಂದಾವನ ಆರಾಧನೆ ಪ್ರಕರಣ, ನೈಸ್ ಕೇಸ್ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದರು.
ಮೃತ ಸುಮನ್ ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹೆಬ್ಬಾಳದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಯಾರದೋ ಕೋಪ ಯಾರ ಮೇಲೋ ತೋರಿಸೋದು: ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅಸಮಾಧಾನ, ನಾಳೆಯೇ ವಿಚಾರಣೆಗೆ ಮುಂದಾದ ಪೀಠ
ಐಶ್ವರ್ಯ ರೈ ಮೈತುಂಬಾ ಬಟ್ಟೆ ಧರಿಸ್ತಿರೋ ಹಿಂದಿದೆ ಗಂಭೀರ ಆರೋಗ್ಯ ಸಮಸ್ಯೆ