newsics.com
ಹತ್ರಾಸ್: ಶಾಲೆಗೆ ಯಶಸ್ಸು ಬರಬೇಕೆಂಬ ಉದ್ದೇಶದಿಂದ 2ನೇ ತರಗತಿಯ ಬಾಲಕನನ್ನು ದಾರುಣವಾಗಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ.
ಕೃತಾರ್ಥ್ ಸಾವನ್ನಪ್ಪಿದ ಬಾಲಕ ಎಂದು ತಿಳಿದು ಬಂದಿದೆ. ಈತನನ್ನು ಶಾಲೆಯ ಹಾಸ್ಟೆಲ್ನಲ್ಲಿ ಉಸಿರುಗಟ್ಟಿಸಿ ಕೊಲ್ಲಲಾಗಿದೆ. ಮೃತದೇಹ ಶಾಲೆಯ ವಾಹನದ ಒಳಗೆ ಪತ್ತೆಯಾಗಿದೆ
ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಐವರನ್ನು ಬಂಧಿಸಿದ್ದಾರೆ. ಶಾಲೆಯ ಮ್ಯಾನೇಜರ್ ದಿನೇಶ್ ಭಘೇಲ್ ಅಲಿಯಾಸ್ ಭಗತ್, ರಾಮ್ಪ್ರಕಾಶ್ ಸೋಲಂಕಿ, ಶಾಲೆಯ ಮ್ಯಾನೇಜರ್ನ ತಂದೆ ಜಶೋಧನ್ ಸಿಂಗ್, ಲಕ್ಷಣ್ ಸಿಂಗ್ ಮತ್ತು ವೀರ್ಪಲ್ ಸಿಂಗ್ ಅಲಿಯಾಸ್ ವೀರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಬಾಲಕ ಕಣ್ಮರೆಯಾಗಿರುವ ಸಂಬಂಧ ಆತನ ತಂದೆ ಕೃಷ್ಣ ಕುಮಾರ್ ಸೆಪ್ಟಂಬರ್ 23ರಂದು ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ಹುಡುಕಾಟ ನಡೆಸಿದಾಗ ಬಾಲಕನನ್ನು ಬಲಿ ನೀಡುವ ಉದ್ದೇಶದಿಂದ ಹತ್ಯೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಈ ಸಂಬಂಧ. ಹತ್ರಾಸ್ ನ ಸಹಪೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.