newsics.com
ಬೆಂಗಳೂರು: ಯೂಟ್ಯೂಬರ್, ಯುವ ಕಲಾವಿದ ಧನರಾಜ್ ಆಚಾರ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ ಯೂಟ್ಯೂಬರ್ ಎಂದೇ ಪ್ರಸಿದ್ಧಿ ಪಡೆದವರು. ಜರ್ನಲಿಸಂ ಪದವೀಧರರಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದರಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.
ಅಬ್ಬಬ್ಬಾ ಸಿನಿಮಾದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಗಮನಸೆಳೆದ ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಚಿ ಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿ ವೀಕ್ಷಕರ ಮನಗೆದ್ದವರು. ಮಾಮೇಶ್ವರ ರಾಘವ ಆಚಾರ್ ಹಾಗೂ ಸಂಧ್ಯಾ ದಂಪತಿಯ ಪುತ್ರರಾದ ಧನರಾಜ್, ವಿವಾಹದ ಬಳಿಕವೂ ಪತ್ನಿ ಪ್ರಜ್ಞಾ ಆಚಾರ್ ಜೊತೆಗೂಡಿ ಅದೆಷ್ಟೋ ವಿಡಿಯೋಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.