newsics.com
ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ವಸೂಲಿ ಆರೋಪ ಸಂಬಂಧ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ರಾಘವೇಂದ್ರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ವಿವಿಧ ಮುಖಂಡರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ನಂತರ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ, ತಡೆಯಾಜ್ಞೆ ನೀಡಿ ಆದೇಶಿಸಿದೆ.
ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ