Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬಾ ದೇವಿ ದರ್ಶನ: 20 ಲಕ್ಷ ಭಕ್ತರಾಗಮನ ನಿರೀಕ್ಷೆ
ಕರ್ನಾಟಕಪ್ರಮುಖ

ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬಾ ದೇವಿ ದರ್ಶನ: 20 ಲಕ್ಷ ಭಕ್ತರಾಗಮನ ನಿರೀಕ್ಷೆ

Share
2 Min Read
SHARE

newsics.com

ಹಾಸನ: ಇಲ್ಲಿನ ಇತಿಹಾಸ ಪ್ರಸಿದ್ಧ ಹಾಸನಾಂಬಾ ದೇವಾಲಯದ ಬಾಗಿಲು ಅಕ್ಟೋಬರ್ 24ರಂದು ತೆರೆಯಲಿದೆ. ನವೆಂಬರ್ 3ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ ನಡೆಯಲಿದೆ.

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬಾ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಶ್ರೀ ಹಾಸನಾಂಬಾ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ-2024 ಪೊಸ್ಟರ್ ಬಿಡುಗಡೆ ಮಾಡಿದ ಸಚಿವ ರಾಜಣ್ಣ, ಒಟ್ಟು 11 ದಿನದಲ್ಲಿ 9 ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿಗಿಂತ ನಾಲ್ಕು ಲಕ್ಷ ಹೆಚ್ಚು ಭಕ್ತರು ಆಗಮಿಸುವುದರೊಂದಿಗೆ ಸುಮಾರು 20 ಲಕ್ಷ ಭಕ್ತರ ಆಗಮನ ನಿರೀಕ್ಷೆ ಹೊಂದಲಾಗಿದೆ ಎಂದರು.

ಮೈಸೂರು ದಸರಾದಂತೆ ವಿದ್ಯುತ್ ಅಲಂಕಾರ, ಹೂವಿನ ಅಲಂಕಾರಕ್ಕೆ ಕ್ರಮವಹಿಸಿ ಸಣ್ಣ ಪುಟ್ಟ ಲೋಪದೋಷಗಳು ಆಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಬೇಲೂರು-ಹಳೇಬೀಡಿನಲ್ಲಿ ಯಾತ್ರಿಕರಿಗೆ ಅನುಕೂಲವಾಗುವಂತೆ ಶೌಚಾಲಯ ವ್ಯವಸ್ಧೆಗೆ ಕ್ರಮವಹಿಸಲು ಸೂಚಿಸಿದರು.

ವಿಶೇಷ ದರ್ಶನ ಟಿಕೆಟ್‌ಗೆ ಲಾಡು ಪ್ರಸಾದ: ಈ ಬಾರಿ 1000 ಹಾಗೂ 300 ರೂ.ಗಳ ವಿಶೇಷ ದರ್ಶನದ ಪಾಸ್ ಗಳಿಗೆ ಲಾಡು ಪ್ರಸಾದ ನೀಡುವ ಕುರಿತು ತೀರ್ಮಾನಿಸಲಾಯಿತು. ವಿಶೇಷ ದರ್ಶನದ 1000 ರೂ. ಪಾಸಿಗೆ ಎರಡು ಹಾಗೂ 300 ರೂ. ಪಾಸ್‌ಗೆ ಒಂದು ಲಾಡನ್ನು ನೀಡಲು ನಿರ್ಧರಿಸಲಾಗಿದೆ. ಇಸ್ಕಾನ್ ಸಂಸ್ಥೆಯಿಂದ ಲಾಡು ಪ್ರಸಾದ ತಯಾರಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸರತಿ ಸಾಲಿನಲ್ಲಿ ಹಾಗೂ ದೇವಾಲಯದ ಆವರಣದಲ್ಲಿ ತಾಸುಗಟ್ಟಲೆ ನಿಲ್ಲುವ ಭಕ್ತಾದಿಗಳಿಗೆ ನೀರು ಹಾಗೂ ಮಜ್ಜಿಗೆ ಪೂರೈಕೆಯನ್ನು ಈ ಬಾರಿಯೂ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಖಾಸಗಿ ಕಂಪನಿಗಳಿಗೆ 3000 ಲೀಟರ್ ನೀರು ಪೂರೈಸಲು ಹಾಗೂ ಸ್ಥಳೀಯ ಕೆಎಂಎಫ್ ಡೈರಿಯಲ್ಲಿ ಮಜ್ಜಿಗೆ ಪೂರೈಕೆಗೆ ಟೆಂಡರ್ ಕರೆಯಲಾಗಿದೆ. ಭಕ್ತಾದಿಗಳು ಸಾಗುವ ಮಾರ್ಗದಲ್ಲಿ ನೇರದರ್ಶನ ವ್ಯವಸ್ಥೆಗೆ ಎಲ್‌ಇಡಿ ಪರದೆ ಅಳವಡಿಸಲಾಗುತ್ತಿದೆ. ಈ ಮೂಲಕ ದೇವಿಯ ಪೂಜೆಯ ನೇರ ಪ್ರಸಾರವನ್ನು ಮಾಡಲಾಗುತ್ತಿದೆ ಎಂದರು.

ಪೂಜಾ ಅವಧಿ ಕಡಿತಕ್ಕೆ ಮನವಿ:

ಈ ಬಾರಿ ದರ್ಶನೋತ್ಸವ ಕೇವಲ ಒಂಬತ್ತು ದಿನ ಮಾತ್ರ ದಿನದ 24 ಗಂಟೆ ದರ್ಶನಕ್ಕೆ ಅವಕಾಶ ಇರುವುದರಿಂದ ಧಾರ್ಮಿಕ ವಿಧಿ ವಿಧಾನಕ್ಕೆ ಧಕ್ಕೆ ಆಗದಂತೆ ಪೂಜೆ ಸಮಯ ಕಡಿತ ಮಾಡುವಂತೆ ಅರ್ಚಕರಿಗೆ ಕೋರಲಾಗುವುದು. ಇದರಿಂದ ಒಂಬತ್ತು ದಿನದಲ್ಲಿ ದಿನಂಪ್ರತಿ ಎರಡು ಗಂಟೆ ಸಮಯ ಉಳಿದರು 18 ಗಂಟೆ ಹೆಚ್ಚುವರಿ ಸಮಯ ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ರಾಜಣ್ಣ ಹೇಳಿದರು.

ಟೂರ್ ಪ್ಯಾಕೇಜ್:

ಹೆಲಿ ಟೂರಿಸಂ ಕಳೆದ ಬಾರಿ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಪ್ರವಾಸದ ಪ್ಯಾಕೇಜ್ ಇರಲಿದೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು.

ಹೆಲಿಕಾಪ್ಟರ್ ಮೂಲಕ ಹಾಸನ ನಗರ ಹಾಗೂ ಹಾಸನಾಂಬಾ ದೇವಾಲಯ ಸುತ್ತ ಪ್ರಯಾಣ ಮಾಡಲು ಈ ಬಾರಿಯೂ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ದೇಶಿ ಹಸುಗಳನ್ನು ‘ರಾಜ್ಯಮಾತಾ’ ಎಂದು ಘೋಷಿಸಿದ ಮಹಾರಾಷ್ಟ್ರ

ಮುಡಾ ಕೇಸ್: 14 ಸೈಟ್ ಮುಡಾಗೆ ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪತ್ರ!

ವೈರಲ್‌ ಆಗುತ್ತಿದೆ ಬೆಂಗಳೂರಿನ 3D ಬಿಲ್‌ಬೋರ್ಡ್‌ : ವಿಡಿಯೋ ನೋಡಿ

TAGGED:Hasanamba Devi Darshan from October 24 to November 3: 20 Lakh Devotees Expected
Share This Article
Facebook Twitter Copy Link Print
Previous Article ಬೆಡ್‌ರೂಂ ಆನಂದ ವೃದ್ಧಿಗೆ ಈ ಆಹಾರ ತಿನ್ನಿ
Next Article BBK11: ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ ಕುಂದಾಪುರ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?