Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾಗೆ 14 ಸೈಟ್ ಮರಳಿಸಿದ ಯತೀಂದ್ರ ಸಿದ್ದರಾಮಯ್ಯ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕ್ರಮ: ಮುಡಾ ಆಯುಕ್ತ
ಕರ್ನಾಟಕಪ್ರಮುಖ

ಮುಡಾಗೆ 14 ಸೈಟ್ ಮರಳಿಸಿದ ಯತೀಂದ್ರ ಸಿದ್ದರಾಮಯ್ಯ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕ್ರಮ: ಮುಡಾ ಆಯುಕ್ತ

Share
2 Min Read
SHARE

newsics.com

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿರುವ 14 ಸೈಟ್‌ಗಳನ್ನು ಹಿಂತಿರುಗಿಸುವ ಕುರಿತ ಪತ್ರವನ್ನು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ ಕಚೇರಿಗೆ ಬಂದು ಕೊಟ್ಟು ಹೋಗಿದ್ದಾರೆ. ಈ ಕುರಿತು ಒಂದೆರಡು ದಿನಗಳಲ್ಲಿ ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಘುನಂದನ್‌ ಮಾಹಿತಿ ನೀಡಿದ್ದಾರೆ.

ಮುಡಾ ಕಚೇರಿಯ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಘುನಂದನ್, ‘ಸಿದ್ದರಾಮಯ್ಯ ಪತ್ನಿ ತಮಗೆ ನೀಡಿರುವ ಬದಲಿ ನಿವೇಶನಗಳನ್ನು ವಾಪಸ್‌ ನೀಡುವ ಪತ್ರವನ್ನು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನಮ್ಮ ಕಚೇರಿಗೆ ಬಂದು ಕೊಟ್ಟು ಹೊಗಿದ್ದಾರೆ. ಸ್ವಇಚ್ಛೆಯಿಂದ ಸೈಟ್ ವಾಪಸ್‌ ಕೊಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ಅದರೆ, ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಪ್ರಕಾರ ಒಮ್ಮೆ ಒಬ್ಬರಿಗೆ ಖಾತೆ ಮಾಡಿಕೊಟ್ಟರೆ ಅದರ ಸಂಪೂರ್ಣ ಮಾಲೀಕರು ಅವರೇ ಆಗುತ್ತಾರೆ. ಆದ್ದರಿಂದ ವಾಪಸ್ ಪಡೆಯಲು ಅವಕಾಶ ಇದೆಯಾ ಎಂಬುದನ್ನು ಕಾನೂನು ತಂಡದ ಜತೆ ಚರ್ಚಿಸುತ್ತೇವೆ. ಅದರಂತೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಪ್ರಕರಣದಲ್ಲಿ ಕಾನೂನು ಏನನ್ನು ಹೇಳುತ್ತದೋ, ಕಾನೂನಿನ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ನಾನು ಕಮಿಷನರ್‌ ಆಗಿರುವುದು ಇದೇ ಮೊದಲು. ಈ ರೀತಿಯ ಪ್ರಕರಣ ಮೊದಲ ಬಾರಿ ನಾನು ನೋಡುತ್ತಿದ್ದೇನೆ. ಕಾನೂನು ಪ್ರಕಾರ ಮುಂದಿನ ಕ್ರಮ ಪರಿಶೀಲನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಭೂ ಮಾಲೀಕರು ಅವರೇ ಆಗಿರುವುದರಿಂದ ಸ್ವ ಇಚ್ಛೆಯಿಂದ‌ ಹಿಂತಿರುಗಿಸುತ್ತಿದ್ದಾರೆ. ಅದನ್ನು ಪರಿಶೀಲಿಸುತ್ತೇವೆ ಎಂದರು.

ಈ ಪ್ರಕರಣದಲ್ಲಿ ಲೋಕಾಯುಕ್ತ ಪೋಲೀಸರು ಕೆಲವು ದಾಖಲೆಗಳನ್ನ ಕೇಳಿ ಪತ್ರ ಬರೆದಿದ್ದು, ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ. ಜಾರಿ‌ ನಿರ್ದೇಶನಾಲಯ ಈವರೆಗೆ ಯಾವುದೇ ದಾಖಲೆ ಕೇಳಿಲ್ಲ. ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ಜತೆಗೆ ಮುಡಾದ ಕೆಲ ಸಿಬ್ಬಂದಿಯನ್ನು ಕೂಡ ಲೋಕಾಯುಕ್ತರ ಸಹಾಯಕ್ಕೆ ಕಳುಹಿಸಲಾಗಿದೆ ಎಂದು ಮುಡಾ ಆಯುಕ್ತ ರಘುನಂದನ್‌ ಮಾಹಿತಿ ನೀಡಿದರು.

ರಾಜ್ಯದಲ್ಲಿ ಮುಡಾ ಪ್ರಕರಣ ತೀವ್ರ ಸಂಚಲನ ಮೂಡಿಸಿದ ಬೆನ್ನಲ್ಲೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮೌನ ಮುರಿದು, ಸೋಮವಾರ ಪತ್ರ ಬರೆದಿದ್ದರು. ಜತೆಗೆ ವಿವಾದಕ್ಕೆ ಕಾರಣವಾಗಿರುವ 14 ಬದಲಿ ನಿವೇಶನಗಳನ್ನು ಮುಡಾಗೆ ಮರಳಿಸುವ ನಿರ್ಧಾರ ಪ್ರಕಟಿಸಿದ್ದರು.

ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ

ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌

TAGGED:discussed with legal expertsnext step: MUDA CommissionerYatindra Siddaramaiah returned 14 sites to MUDA
Share This Article
Facebook Twitter Copy Link Print
Previous Article ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ
Next Article ದ.ಕ ವಿಧಾನ ಪರಿಷತ್ ಉಪ ಚುನಾವಣೆ; ಅಭ್ಯರ್ಥಿ ಘೋಷಿಸಿದ ಬಿಜೆಪಿ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?