newsics.com
ಬೆಂಗಳೂರು: ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಟ್ಟೆಗೆ ಬೆಂಕಿ ತಗುಲಿರುವ ಘಟನೆ ವಿಧಾನಸೌಧದ ಮುಂಭಾಗ ನಡೆದಿದೆ. ಇದನ್ನು ಕಂಡ ಗನ್ ಮ್ಯಾನ್ ಕೂಡಲೆ ಬೆಂಕಿ ನಂದಿಸಿದ್ದಾರೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.
ಸಿಎಂ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ, ಕಿತ್ತೂರು ಉತ್ಸವದ ಠಥಕ್ಕೆ ಹಸಿರು ನಿಶಾನೆ ತೋರಿಸಿವ ವೇಳೆ ಪಕ್ಕದಲ್ಲೇ ಇದ್ದ ದೀಪದ ಬೆಂಕಿ ಸಿದ್ದರಾಮಯ್ಯ ಅವರ ಶಲ್ಯಕ್ಕೆ ತಾಗಿದೆ. ಕೂಡಲೆ ಗನ್ ಮ್ಯಾನ್ ಬೆಂಕಿ ನಂದಿಸಿದ್ದಾರೆ.