newsics.com
ಬಿಗ್ ಬಾಸ್ ಮನೆಯಲ್ಲಿರುವ ಸ್ವಯಂಘೋಷಿತ ವಕೀಲ ಕೆ.ಎನ್. ಜಗದೀಶ್ ಕುಮಾರ್ ಈಗ ವಿವಾದಕ್ಕೆ ಸಿಲುಕಿದ್ದಾರೆ.
ಎಲ್ಲ ಕಡೆ ತಾನು ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಜಗದೀಶ್ ಕುಮಾರ್ ವಾಸ್ತವದಲ್ಲಿ ವಕೀಲರೇ ಅಲ್ಲ ಎನ್ನುವುದಕ್ಕೆ ಮತ್ತೊಂದು ಪುಷ್ಟಿ ಸಿಕ್ಕಿದೆ. ಅವರ ವಕೀಲಿ ಪರವಾನಗಿಯನ್ನು ಕಳೆದ ಮೇ 7ರಂದೇ ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ. ಈ ಮಾಹಿತಿ ತಡವಾಗಿ ಬೆಳಕಿಗೆ ಬಂದಿದ್ದು, ಇದಕ್ಕೆ ಜಗದೀಶ್ ಅವರು ಮಾಡಿದ ವಂಚನೆಯೇ ಕಾರಣ ಎನ್ನಲಾಗಿದೆ.
ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್ ನಕಲಿ ಎನ್ನುವುದು ದೃಢಪಟ್ಟಿದೆ. ಈ ಕಾರಣದಿಂದ ಅವರ ಪದವಿ ಹಾಗೂ ಎಲ್ಎಲ್ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವರು ಜಗದೀಶ್ ವಿರುದ್ಧ ದೂರು ನೀಡಿದ್ದರು. ಅವರ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರಬಿದ್ದಿತ್ತು. ಬಳಿಕ ಅವರ ಪರವಾನಗಿಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ.
ದೆಹಲಿ ಬಾರ್ ಕೌನ್ಸಿಲ್ ಆದೇಶದ ಪ್ರಕಾರ ಜಗದೀಶ್ ಕುಮಾರ್ ಅವರು ಯಾವುದೇ ಕೋರ್ಟ್ನಲ್ಲಿ ವಾದ ಮಂಡಿಸುವಂತಿಲ್ಲ.
ಇನ್ನು, ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಡಾಮಿನೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಕಾರಣದಿಂದ ಅವರು ಎಲ್ಲರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಅವರು ಒಮ್ಮೆ ಹೊರಕ್ಕೆ ಹೋಗುವ ನಿರ್ಧಾರಕ್ಕೂ ಬಂದಿದ್ದರು. ನಂತರ ಮನಸ್ಥಿತಿ ಬದಲಿಸಿಕೊಂಡಿದ್ದಾರೆ.
ಚಾಣಕ್ಯ ನೀತಿ: ಈ ಮೂರು ವಿಷಯಗಳನ್ನು ಮಕ್ಕಳಿಗೆ ಬಾಲ್ಯದಿಂದಲೇ ಕಲಿಸಬೇಕು….
ಸರ್ಕಸ್ ನಲ್ಲಿ ಕರಡಿ ದಾಳಿ! ಎದ್ನೋಬಿದ್ನೋ ಎಂದು ಓಡಿದ ಜನರು… ವಿಡಿಯೋ ನೋಡಿ
ಭಾರೀ ಮಳೆ ಹಿನ್ನೆಲೆ: ಉಪ್ಪು ಉತ್ಪಾದನೆ ಕುಂಠಿತ, ಬೆಲೆಯೇರಿಕೆ ಸಾಧ್ಯತೆ