newsics.com
ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸಿ, ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.
ಹಿಂದಿ ಬಿಗ್ ಬಾಸ್ ನ 10ನೇ ಸೀಸನ್ ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್ಗೆ ಅಲ್ಲವೇ ಅಲ್ಲ’ ಎಂದಿದ್ದರು. ವೀಕೆಂಡ್ ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲ್ಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.
ಕನ್ನಡದಲ್ಲೂ ಬಿಗ್ ಬಾಸ್ ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.