newsics.com
ಮಂಡ್ಯ: ದಸರಾ ಮಹೋತ್ಸವಕ್ಕೆ ಆಗಮಿಸಿದ ಹಿರಣ್ಯ ಆನೆ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಮಿನಿ ವಿಧಾನಸೌಧದ ಬಳಿ ನಡೆದಿದೆ.
ಇನ್ನು ಆನೆಯ ರಂಪಾಟಕ್ಕೆ ದಿಕ್ಕಾಪಾಲಾಗಿ ಜನರು ಓಡಿದ್ದಾರೆ. ಕೂಡಲೇ ಎಚ್ಚೆತ್ತ ಮಾವುತರು ಹಾಗೂ ಕಾವಾಡಿಗರು ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ.
ನಿನ್ನೆಯಷ್ಟೇ ಶ್ರೀರಂಗಪಟ್ಟಣಕ್ಕೆ ಮಹೇಂದ್ರ, ಲಕ್ಷ್ಮೀ, ಹಿರಣ್ಯ ಎಂಬ 3 ಆನೆಗಳು ಆಗಮಿಸಿವೆ. ಬನ್ನಿಮಂಟಪದಿಂದ ರಂಗನಾಥ ಮೈದಾನದವರೆಗೆ ಅಂಬಾರಿ ಜೊತೆ ಹಿರಣ್ಯ ಆನೆ ಹೆಜ್ಜೆ ಹಾಕಲಿದೆ. ಮಹೇಂದ್ರ ಆನೆ ಮರದ ಅಂಬಾರಿ ಹೊರಲಿದೆ. ಈ ಆನೆಗೆ ಕುಮ್ಕಿ ಆನೆಯಾಗಿ ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ಹೆಜ್ಜೆ ಹಾಕಲಿದೆ. ಆನೆಗಳಿಗೆ ಚಿತ್ರಾಲಂಕಾರದ ಮಾಡಿದ ಬಳಿಕ ಹಿರಣ್ಯ ಎಂಬ ಆನೆ ಬೆದರಿ ಅಡ್ಡಾದಿಡ್ಡಿ ಓಡಾಡಿದೆ.