newsics.com
ಛತ್ತೀಸ್ಗಢ: ಛತ್ತೀಸ್ಗಢದ ನಾರಾಯಣಪುರ ಮತ್ತು ದಂತೇವಾಡ ಗಡಿ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇದುವರೆಗೆ 31 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಅಬುಜ್ಮದ್ ಪ್ರದೇಶದ ಅರಣ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಜಾಡು ಹಿಡಿದು ಮುಂದೆ ಸಾಗುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದಾರೆ. ಇದಕ್ಕುತ್ತರವಾಗಿ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
“ಶುಕ್ರವಾರ ಎನ್ಕೌಂಟರ್ ನಡೆದ ದಟ್ಟ ಅರಣ್ಯದಿಂದ ಇಂದು ಬೆಳಗ್ಗೆ ಇನ್ನೂ ಮೂವರು ನಕ್ಸಲೀಯರ ಶವಗಳನ್ನು ಪತ್ತೆ ಮಾಡಲಾಗಿದೆ. ಇದರೊಂದಿಗೆ, ಎನ್ಕೌಂಟರ್ನಲ್ಲಿ ನಕ್ಸಲೀಯರ ಸಂಖ್ಯೆ 31 ಕ್ಕೆ ಏರಿದೆ. ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಪ್ರಾಥಮಿಕ ತನಿಖೆ ಪ್ರಕಾರ, ಅವರು ಪಿಎಲ್ಜಿಎಗೆ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಸೇರಿದ ಮಾವೋವಾದಿಗಳ ಪೂರ್ವ ಬಸ್ತಾರ್ ವಿಭಾಗದವರಾಗಿದ್ದಾರೆ” ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ. ಮಾಹಿತಿ ನೀಡಿದ್ದಾರೆ.