newsics.com
‘ಬಿಗ್ ಬಾಸ್ ಕನ್ನಡ ಸೀಸನ್ 11′ ರಿಯಾಲಿಟಿ ಶೋನಲ್ಲಿ ಮೊದಲ ವಾರದ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ.
ಯಮುನಾ ಶ್ರೀನಿಧಿ ಅವರು ಒಂದೇ ವಾರದಲ್ಲಿ ಆಟ ಮುಗಿಸಿದ್ದಾರೆ. ಫಸ್ಟ್ ವೀಕ್ನಲ್ಲಿಯೇ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ.
ಟ್ರೋಫಿ ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡು ಬಿಗ್ ಬಾಸ್ ಮನೆಗೆ ಬಂದಿದ್ದ ಯಮುನಾ ಶ್ರೀನಿಧಿ ಅವರಿಗೆ ನಿರಾಸೆ ಆಗಿದೆ.
ಒಂದೇ ವಾರಕ್ಕೆ ಬಿಗ್ ಬಾಸ್ ಆಟ ಅಂತ್ಯಗೊಳಿಸಿದ ಯಮುನಾ ಶ್ರೀನಿಧಿ ಅವರಿಗೆ 1 ಲಕ್ಷ ರೂಪಾಯಿ ಚೆಕ್ ನೀಡಲಾಯಿತು.
ಮೊದಲ ವಾರದ ಎಲಿಮಿನೇಷನ್ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಪೈಪೋಟಿ ಹೆಚ್ಚಾಗಿತ್ತು. ನರಕದಲ್ಲಿ ಇದ್ದ ರಂಜಿತ್ ಅವರಿಗೆ ಸ್ವರ್ಗಕ್ಕೆ ಎಂಟ್ರಿ ಸಿಕ್ಕಿದೆ. ಇಷ್ಟು ದಿನ ಸ್ವರ್ಗದಲ್ಲಿದ್ದ ಜಗದೀಶ್ ಅವರನ್ನು ನರಕಕ್ಕೆ ಕಳಿಸಲಾಗಿದೆ. ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಹಂಸಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
7 ದಿನಗಳ ಕಾಲ ವಿವಿಧ ಟಾಸ್ಕ್ನಲ್ಲಿ ಗುದ್ದಾಡಿ ಎಲಿಮಿನೇಷನ್ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆಗಿದ್ದಾರೆ. ಇದರಿಂದ ಅವರಿಗೆ ಶಾಕ್ ಆಗಿದೆ. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಎಲಿಮಿನೇಷನ್ ಆಗುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.
ಯಮುನಾ ಶ್ರೀನಿಧಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವಾಗ ಐಶ್ವರ್ಯಾ ಭಾವುಕವಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಬಂದ ಯಮುನಾ ಅವರು ಸುದೀಪ್ ಜತೆ ಎಲಿಮಿನೇಷನ್ ಬಗ್ಗೆ ಮಾತನಾಡಿದರು. ‘ಇದನ್ನು ನಾನು ನಿರೀಕ್ಷಿಸಿರಲ್ಲ, ದಿನ ಇರುವಷ್ಟು ಸಾಮರ್ಥ್ಯ ನನ್ನಲ್ಲಿ ಇತ್ತು ಅನಿಸುತ್ತೆ. ಶಿಶಿರ್, ಧರ್ಮ, ತ್ರಿವಿಕ್ರಮ್ ಅವರು ಟಾಪ್ 3 ಸ್ಪರ್ಧಿಗಳಾಗಿರುತ್ತಾರೆ’ ಎಂದು ಹೇಳಿ ಬಿಗ್ ಬಾಸ್ ಆಟಕ್ಕೆ ಯಮುನಾ ವಿದಾಯ ಹೇಳಿದರು.
ಏರ್ ಶೋ ವೇಳೆ ನೂಕುನುಗ್ಗಲು, ನಾಲ್ವರ ಸಾವು, ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಸೆರಗು ಜಾರಿದ್ರೂ ಡೋಂಟ್ ಕೇರ್ ಎಂದ ಪುಷ್ಪ ನಟಿ; ಹುಡುಗರ ನಿದ್ದೆಗೆಡಿಸಿದ ಅನಸೂಯಾ