newsics.com
ಬೆಂಗಳೂರು: ಮುಡಾ ಹಗರಣ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ನಿವೇಶನದ ಮಾಲೀಕರಾದ ಎಂ.ಎಸ್.ಶಿವಲಿಂಗಪ್ಪ, ಎಂ.ಚಂದ್ರಶೇಖರನ್, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಪತ್ರದಲ್ಲಿ, ಥಣಿಸಂದ್ರ, ಸಂಪಿಗೆಹಳ್ಳಿ, ಜಕ್ಕೂರು ಕೆ.ನಾರಾಯಣಪುರ ಹಾಗೂ 16 ಹಳ್ಳಿಗಳೂ ಸೇರಿ ಸುಮಾರು 800 ಎಕರೆ ಪ್ರದೇಶದಲ್ಲಿ ಬಿಡಿಎಯಿಂದ ಅರ್ಕಾವತಿ ಬಡಾವಣೆ ನಿರ್ಮಾಣವಾಗಿತ್ತು. 2004ರಲ್ಲಿ ನಿವೇಶನಕ್ಕಾಗಿ ಅರ್ಜಿ ಆಹ್ವಾನಿಸಿದ್ದ ಬಿಡಿಎಗೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 20 ಸಾವಿರ ಫಲಾನುಭವಿಗಳನ್ನು ಪರಿಗಣಿಸಲಾಗಿತ್ತು. 12 ಸಾವಿರ ನಿವೇಶನದಾರರಿಗೆ ಬಿಡಿಎ ನಿವೇಶನ ನೋಂದಣಿ ಹಾಗೂ ಕ್ರಯಪತ್ರ ಮಾಡಿಕೊಡಲಾಗಿತ್ತು.