newsics.com
ಇಸ್ಲಾಮಾಬಾದ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಭಾಗವಹಿಸಲು ಇಸ್ಲಾಮಾಬಾದ್ಗೆ ತೆರಳಿದ್ದಾರೆ.
ಕಾಶ್ಮೀರ ಸಮಸ್ಯೆ ಮತ್ತು ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ದೇಶಗಳ ಮಧ್ಯೆ ದ್ವೇಷಮಯ ವಾತಾವರಣ ಇರುವಾಗ ಸುಮಾರು 9 ವರ್ಷದ ನಂತರ ಭಾರತದ ಮಂತ್ರಿ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮೊದಲು ವಿದೇಶಾಂಗ ಸಚಿವೆಯಾಗಿದ್ದ ದಿ. ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನಕ್ಕೆ 2015ರ ಡಿಸೆಂಬರ್ನಲ್ಲಿ ಭೇಟಿ ನೀಡಿದ್ದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ದಕ್ಷಿಣ ಏಷ್ಯಾದ ಮಹಾನಿರ್ದೇಶಕ ಇಲ್ಯಾಸ್ ಮೆಹಮೂದ್ ನಿಜಾಮಿ ಅವರು ಇಸ್ಲಾಮಾಬಾದ್ನ ನೂರ್ ಖಾನ್ ವಾಯುನೆಲೆಯಲ್ಲಿ ಜೈಶಂಕರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟ ಮಕ್ಕಳು ಹೂಗುಚ್ಛಗಳನ್ನು ಅರ್ಪಿಸಿದರು.