newsics.com
ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಹೌದು, ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.