newsics.com
ಬೆಂಗಳೂರು: ನಿರಂತರ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ.
ನಾನಾ ಅವಾಂತರಗಳು ಸಂಭವಿಸಿವೆ. ಇಷ್ಟು ದಿನ ಕಾಣಿಯಾಗಿದ್ದ ಸೂರ್ಯದೇವ ಇಂದು ಆಚೆ ಬಂದಿದ್ದಾನೆ. ಆದರೆ ಮಳೆ ಹೊಡೆತಕ್ಕೆ ಸಿಲುಕಿ ಅದರಿಂದ ಸಹಜ ಸ್ಥಿತಿಯತ್ತ ಮರಳುತ್ತಿರುವಾಗಲೇ ಬೆಂಗಳೂರಿಗೆ ಮತ್ತೆ ವರುಣ ಎಚ್ಚರಿಕೆ ಕೊಟ್ಟಿದೆ.
ಅಕ್ಟೋಬರ್ 21ರವರೆಗೆ ನಗರದಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.