newsics.com
ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಹೆಸರು ಇಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಉಗ್ರಪ್ಪ ಸಿಎಂ ಸಿದ್ದರಾಮಯ್ಯಗೆ ಹಲವು ಬೇಡಿಕೆಗಳನ್ನು ಇಟ್ಟರು. ಉಗ್ರಪ್ಪ ಮನವಿಗೆ ಸ್ಪಂದಿಸಿದ ಸಿಎಂ ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡುವುದಾಗಿ ಘೋಷಿಸಿದರು.
ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಹೆಸರು ಇಡುತ್ತೇವೆ. ಜೊತೆಗೆ ಪರಿಶಿಷ್ಟ ಪಂಗಡಗಳ ವಸತಿ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ನಾಮಕರಣ ಮಾಡೋದಾಗಿ ತಿಳಿಸಿದರು