newsics.com
ನವದೆಹಲಿ: ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ ಭಾರತೀಯ ಅಧಿಕಾರಿ ವಿಕಾಸ್ ಯಾದವ್ ವಿರುದ್ಧ ಅಮೆರಿಕದ ನ್ಯಾಯಾಂಗ ಇಲಾಖೆಯು ಚಾರ್ಜ್ ಶೀಟ್ ದಾಖಲಿಸಿದೆ.
ಕೆನಡಾ ಮಾಡಿರುವ ಇತ್ತೀಚಿನ ಆರೋಪಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆಯು ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಿಸುವ ಸಾಧ್ಯತೆಯಿದೆ.
ಸಿಖ್ ಪ್ರತ್ಯೇಕತಾವಾದಿ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಭಾರತ ಸ್ಪಷ್ಟವಾಗಿ ನಿರಾಕರಿಸಿದೆ ಮತ್ತು ಆರೋಪಗಳನ್ನು ದೃಢೀಕರಿಸಲು ಯಾವುದೇ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿಲ್ಲ ಎಂದು ಹೇಳಿದೆ.