newsics.com
ಬೆಂಗಳೂರು: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ಇ.ಡಿ ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಯೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಬಹುಕೋಟಿ ಹಗರಣ ಪ್ರಕರಣದಲ್ಲಿ ನಿನ್ನೆ ಮುಡಾ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ಕಾದು ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಅಚ್ಚರಿಗೆ ಒಳಗಾಗಿದ್ದಾರೆ.
ಡಿನೋಟಿಫೈ ಮಾಡಿ ನೋಟಿಫೈ ಮಾಡಲು ತೆಗೆದುಕೊಂಡ ನಿರ್ಧಾರದ ದಾಖಲೆಗಳೇ ನಾಪತ್ತೆಯಾಗಿವೆ. 1992 ರ ಫೆಬ್ರವರಿ ತಿಂಗಳಿನ ಕೆಲ ದಾಖಲೆಗಳು ಮಿಸ್ಸಿಂಗ್ ಆಗಿವೆ. ಅದೇ ಸಂದರ್ಭದಲ್ಲಿ ಡಿನೋಟಿಫೈ ಆಗಿದ್ದ ಭೂಮಿಯ ಪರಭಾರೆಯಾಗಿತ್ತು.