newsics.com
ಬೆಂಗಳೂರು: ಬೆಂಗಳೂರಿನಲ್ಲಿ ಒಂದೆರಡು ದಿನ ಅಬ್ಬರಿಸಿದ್ದ ಮಳೆರಾಯ ಕೊಂಚ ಗ್ಯಾಪ್ ಬಳಿಕ ಮತ್ತೆ ಎಂಟ್ರಿಕೊಡುವುದಕ್ಕೆ ಸಜ್ಜಾಗಿದ್ದಾನೆ.
ನಿನ್ನೆ ಒಂದು ದಿನ ಬಿಡುವು ಕೊಟ್ಟಿದ್ದ ವರುಣ ಇವತ್ತು ಮತ್ತೆ ಪ್ರತ್ಯಕ್ಷವಾಗಿದ್ದು, ಸಿಟಿಮಂದಿ ಪರದಾಡುವಂತೆ ಮಾಡಿದರೆ, ಇತ್ತ ಇನ್ನೂ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಮೋಡ ಕವಿದ ವಾತಾವರಣದೊಂದಿಗೆ ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಸುರಿದಿದ್ದು ದಿಢೀರ್ ಬಂದ ಮಳೆಗೆ ಸಿಟಿ ಜನರು ಪರದಾಡಿದರು. ವಿಧಾನಸೌಧ, ಟೌನ್ ಹಾಲ್, ಮೆಜೆಸ್ಟಿಕ್, ಶಾಂತಿನಗರ ಸೇರಿ ಹಲವೆಡೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ರೆ, ಮಳೆರಾಯನ ಎಂಟ್ರಿಯಿಂದ ಟ್ರಾಫಿಕ್ ಜಾಮ್ ಮತ್ತಷ್ಟು ಹೆಚ್ಚಾಗಿತ್ತು.