newsics.com
ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು ಹೇಳಿದರು.
ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದು ಸಚಿವರುರು.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ