newsics.com
ಬೆಂಗಳೂರು: ಸಾಲದ ಬಡ್ಡಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಯೊಬ್ಬ 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸೆಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್(39 ವರ್ಷ) ಎಂಬಾತನನ್ನು ಬಂಧಿಸಲಾಗಿದೆ.
ಮೂಲಗಳ ಪ್ರಕಾರ, ಸಂತ್ರಸ್ತ ಯುವತಿಯ ತಂದೆ ಆರೋಪಿ ರವಿಕುಮಾರ್ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದಿರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಕಷ್ಟು ಬಾರಿ ರವಿಕುಮಾರ್ ಸಂತ್ರಸ್ತೆಯ ತಂದೆಯೊಂದಿಗೆ ಬಡ್ಡಿ ಮತ್ತು ಅಸಲು ಪಾವತಿಗಾಗಿ ಜಗಳ ಮಾಡಿದ್ದ. ಬಳಿಕ ಅವರು 30 ಸಾವಿರ ರೂ. ಸಾಲ ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ. ಈ ಹಿಂದೆ ಬಲವಂತವಾಗಿ ಸಂತ್ರಸ್ತೆಗೆ ಆರೋಪಿ ರವಿಕುಮಾರ್ ಕಿಸ್ ಕೂಡ ಕೊಟ್ಟಿದ್ದ. ಅಲ್ಲದೇ ಕಿಸ್ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೀಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನ ಹಳ್ಳಿ ಪೊಲೀಸರು ರವಿಕುಮಾರ್ನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
,