newsics.com
ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೆ ತೀವ್ರ ಬೆನ್ನು ನೋವು ಉಂಟಾಗಿದೆ. ಅವರಿಗೆ ಎಂಆರ್ಐ ಸ್ಕಾನಿಂಗ್ ನ ಅಗತ್ಯವಿದೆ. ಇದನ್ನು ಮಾಡಿಸಲು ವೈದ್ಯರು ಸೂಚಿಸುತ್ತಲೇ ಬಂದಿದ್ದರು. ಆದರೆ, ಇದಕ್ಕೆ ದರ್ಶನ್ ಒಪ್ಪಿರಲಿಲ್ಲ. ಈಗ ಬಳ್ಳಾರಿಯ ವಿಮ್ಸ್ನಲ್ಲಿ ಎಂಆರ್ಐ ಸ್ಕಾನಿಂಗ್ ಮಾಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ದರ್ಶನ್ ಕೂಡ ಒಪ್ಪಿಗೆ ನೀಡಿದ್ದಾರೆ.
ಇನ್ನು ದರ್ಶನ್ ಬೆನ್ನುನೋವು ಸಮಸ್ಯೆ ಮಿತಿಮೀರಿದೆ. ಫಿಸಿಯೋಥೆರಪಿಯನ್ನು ಈಗಾಗಲೇ ಮಾಡಿಸಲಾಗುತ್ತಿದೆ. ಆದಾಗ್ಯೂ ಬೆನ್ನು ನೋವು ಕಡಿಮೆ ಆಗುತ್ತಿಲ್ಲ. ಹೀಗಾಗಿ ದರ್ಶನ್ ಜೊತೆ ಜೈಲಿನ ಅಧಿಕಾರಿಗಳು ಮಾತನಾಡಿದ್ದು, ಸ್ಕ್ಯಾನಿಂಗ್ ಮಾಡಿಸಲೇಬೇಕು ಎಂದಿದ್ದಾರೆ. ಜೈಲಾಧಿಕಾರಿಗಳ ಮಾತಿಗೆ ದರ್ಶನ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 22ರಂದು ದರ್ಶನ್ ಕುಟುಂಬಸ್ಥರು ಜೈಲಿಗೆ ಭೇಟಿ ನೀಡಲಿದ್ದಾರೆ. ಕುಟುಂಬಸ್ಥರೊಂದಿಗೆ ಮಾತನಾಡಿ ಸ್ಕಾನಿಂಗ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.