newsics.com
ನವದೆಹಲಿ: ಸ್ವಾತಂತ್ರ್ಯದ ನಂತರ ರಷ್ಯಾದೊಂದಿಗಿನ ನಮ್ಮ ಇತಿಹಾಸವನ್ನು ನೋಡಿದರೆ ನಮ್ಮ ಹಿತಾಸಕ್ತಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲು ರಷ್ಯಾ ಎಂದಿಗೂ ಏನನ್ನೂ ಮಾಡಿಲ್ಲ ಎಂದು ನಾನು ಹೇಳಬಲ್ಲೆ ಅಂತಾ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ರಷ್ಯಾಕ್ಕೆ ಹೋಗುತ್ತಿದ್ದಾರೆ. ಇಂದು ರಷ್ಯಾದ ಪರಿಸ್ಥಿತಿಯು ವಿಭಿನ್ನವಾಗಿದೆ ಎಂದು ನಾನು ಭಾವಿಸುತ್ತೇನೆ. ಪಾಶ್ಚಿಮಾತ್ಯ ದೇಶಗಳ ಜೊತೆ ಬಹುತೇಕ ರಷ್ಯಾದ ಸಂಬಂಧ ಮುರಿದು ಬಿದ್ದಿದೆ. ರಷ್ಯಾ ಈಗ ಏಷ್ಯಾದ ದೇಶಗಳತ್ತ ಹೆಚ್ಚು ವಾಲುತ್ತಿದೆ. ಏಷ್ಯಾದ ದೇಶವಾಗಿರುವ ನಾವು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನಮಗೆ ಇಂದು ಒಳ್ಳೆಯದಾಗುತ್ತಿದೆ. ರಷ್ಯಾವು ಪ್ರಮುಖ ನೈಸರ್ಗಿಕ ಸಂಪನ್ಮೂಲ ಶಕ್ತಿಯಾಗಿದ್ದು ನಾವು ದೊಡ್ಡ ಗ್ರಾಹಕರಾಗಿದ್ದೇವೆ ಎಂದು ಹೇಳಿದರು.
ಹಿಂದೆ ಪಶ್ಚಿಮದ ರಾಷ್ಟ್ರಗಳು ವಿಶ್ವದಲ್ಲಿ ಪ್ರಾಬಲ್ಯವನ್ನು ಹೊಂದಿದ್ದವು. ಆದರೆ ಕಳೆದ 20-25 ವರ್ಷಗಳಲ್ಲಿ ಪಾಶ್ಚಿಮಾತ್ಯೇತರ ದೇಶಗಳು ವಿಶ್ವಕ್ಕೆ ಕೊಡುಗೆ ನೀಡುತ್ತಿವೆ. ಇದರಿಂದಾಗಿ ಮರು ಸಮತೋಲನ, ಬಹುಧ್ರುವೀಯತೆ ಆರಂಭವಾಗಿದೆ ಎಂದರು.
ಸ್ವಲ್ಪ ಮಟ್ಟಿಗೆ ಸಾಮಾನ್ಯ ಪಾಶ್ಚಾತ್ಯ ದೇಶಗಳಿಗೆ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ 1945 ರ ಮೊದಲು ಮತ್ತು ನಂತರದ ವಿಶ್ವ ಕ್ರಮವು ಪಾಶ್ಚಾತ್ಯವಾಗಿತ್ತು. ಹಿಂದೆ ನೀವು ಮೇಲಕ್ಕೆ ನೋಡುತ್ತಿದ್ದಾಗ ನಾನು ಕೆಳಗೆ ನೋಡುತ್ತಿದ್ದೆ. ಆದರೆ ಇನ್ನು ಮುಂದೆ ಹಾಗೆ ಇರುವುದಿಲ್ಲ. ಭಾರತ, ಚೀನಾದಂತಹ ದೊಡ್ಡ ರಾಷ್ಟ್ರಗಳು ತಮ್ಮದೇ ನಿಲುವುಗಳನ್ನು ತಗೆದುಕೊಳ್ಳುತ್ತದೆ. ಹೀಗಾಗಿ ಪಶ್ಚಿಮದ ದೇಶಗಳಿಗೆ ಹೊಂದಿಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.