newsics.com
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೇಲ್ ಸಿಗ್ತಿಲ್ಲ ಅನ್ನೋ ಟೆನ್ಷನ್ ಒಂದೆಡೆಯಾದ್ರೆ, ಮತ್ತೊಂದಡೆ ಬೆನ್ನು ನೋವು ದಾಸನನ್ನು ಕಾಡ್ತಿದೆ. ಸದ್ಯ ಜೈಲಿನಲ್ಲಿ ಬಂಧಿಯಾಗಿ, ನೋವಲ್ಲಿ ನರಳುತ್ತಿರುವ ಪತಿ ದರ್ಶನ್ ನೋಡಲು ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ.
ಹೌದು, ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ನೋಡಲು 10ನೇ ಬಾರಿ ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.
ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ರನ್ನು ನೋಡಲು ಆರೋಗ್ಯ ವಿಚಾರಿಸಲು ಪತ್ನಿ ವಿಜಯಲಕ್ಷ್ಮಿ ಮತ್ತು ಸಂಬಂಧಿ ಸುಶಾಂತ್ ನಾಯ್ಡು ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ಬ್ಯಾಗ್ನಲ್ಲಿ ದರ್ಶನ್ಗೆ ಅಗತ್ಯವಿರುವ ಬಟ್ಟೆ, ತಿಂಡಿ ತಿನಿಸುಗಳನ್ನು ತಂದಿದ್ದಾರೆ. ಬಳಿಕ ದರ್ಶನ್ಗೆ ಸ್ಕ್ಯಾನಿಂಗ್ ಮಾಡಿಸುವ ಕುರಿತು ಮತ್ತು ಕಾನೂನು ಸಮರದ ಕುರಿತು ಚರ್ಚಿಸಿದ್ದಾರೆ.
ಇನ್ನೂ ಜೂನ್ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದರು.