newsics.com
ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಬುಧವಾರವೂ(ಅ.23) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಸೇರಿ ರಾಜ್ಯದ 12ಕ್ಕೂ ಹೆಚ್ವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಬುಧವಾರ ಮಧ್ಯಾಹ್ನ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೇಂದ್ರೀಯ ವಿಹಾರ ಸೇರಿದಂತೆ ಹಲವು ಅಪಾರ್ಟ್ಮೆಂಟ್ಗಳು, ಕ್ವಾಟ್ರರ್ಸ್ಗಳು ಜಲಾವೃತವಾಗಿವೆ.
ಇನ್ನು, ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಸಂಭವಿಸಿದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿಕೆಯಾಗಿದೆ. ಕಟ್ಟಡ ಅವಶೇಷಗಳ ಅಡಿ ಸಿಲುಕಿರುವ 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.
ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮಂಗಳವಾರ ನಾಲ್ವರ ಶವ ಹೊರತೆಗೆಯಲಾಗಿತ್ತು. ರಕ್ಷಣೆ ಮಾಡಲಾಗಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ.
21 ಕಾರ್ಮಿಕರ ರಕ್ಷಣೆಗೆ ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಿಲ್ಲರ್ ಹಾಗೂ ಕಟ್ಟಡದ ಅವಶೇಷಗಳನ್ನು ಗ್ಯಾಸ್ ಕಟರ್ ಮೂಲಕ ಒಡೆದು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿತ್ತು.
ಬೆಂಗಳೂರಲ್ಲಿ ಭಾರೀ ಮಳೆ, ಕಟ್ಟಡ ಕುಸಿತ: ಐವರ ಸಾವು? ಮೂವರ ಶವ ಹೊರಕ್ಕೆ, ಅವಶೇಷಗಳಡಿ 17ಕ್ಕೂ ಹೆಚ್ಚು ಕಾರ್ಮಿಕರು
ಸಲ್ಮಾನ್ ಬೆನ್ನತ್ತಿರುವ ಲಾರೆನ್ಸ್ ಬಿಷ್ಣೋಯಿ ಕೊಂದರೆ 1,11,11,111 ರೂ. ಬಹುಮಾನ! ಯಾರು ಈ ಘೋಷಣೆ ಮಾಡಿದ್ದು?
ಕಾಮನ್ವೆಲ್ತ್ ಕ್ರೀಡಾಕೂಟ: 9 ಆಟಗಳಿಗೆ ಗೇಟ್ಪಾಸ್, ಭಾರತಕ್ಕೆ ಗ್ರೇಟ್ ಲಾಸ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್ ಮೂಲಕ ದರ್ಶನ್ ಶಿಫ್ಟ್