newsics.com
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ.
ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಸಂಡೂರಿಗೆ ಅನ್ನಪೂರ್ಣ ಅವರನ್ನು ಕಣಕ್ಕಿಳಿಸಿದೆ. ಆದರೆ, ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ.
ಇನ್ನು ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಟಿಕೆಟ್ಗಾಗಿ ಕಸರತ್ತು ನಡೆಸಿದ್ದ ಸಿ.ಪಿ.ಯೋಗೇಶ್ವರ್ಗೆ ನಿರಾಸೆಯಾಯಿತು. ಈ ಹಿನ್ನೆಲೆಯಲ್ಲಿ ನಿನ್ನೆ ಸಿಪಿವೈ ಕಾಂಗ್ರೆಸ್ ಸೇರ್ಪಡೆಯಾದರು.