newsics.com
ಬೆಂಗಳೂರು: ಮತ್ತೋರ್ವ ಕಾಂಗ್ರೆಸ್ ಶಾಸಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ..
ಅಲ್ಲದೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ನಾಳೆಗೆ (ಅ.25) ಕಾಯ್ದಿರಿಸಿದೆ.
ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಣೆ ಮಾಡಲಾಗಿತ್ತು.
ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.