newsics.com
ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶದಂತೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಜೆ ಸಂಬಂಧಿಸಿದಂತೆ ಕಾರವಾರದ ಶಾಸಕ ಸತೀಶ್ ಸೈಲ್ ಮತ್ತಿತರ ಅಪರಾಧಿಗಳನ್ನು ಸಿಬಿಐ ಬಂಧಿಸಿದೆ.
ಶಾಸಕ ಸೈಲ್ ಸೇರಿ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಬಳಿಯೇ ಎಲ್ಲರನ್ನೂ ಸಿಬಿಐ ಅಧಿಕಾರಿಗಳು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಶಿಕ್ಷೆಯ ಪ್ರಮಾಣವನ್ನು ನಾಳೆಗೆ (ಅ.25) ಕಾಯ್ದಿರಿಸಿದೆ. ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಣೆ ಮಾಡಲಾಗಿತ್ತು.
ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಇವರೆಲ್ಲರಬ್ನೂ ಈಗ ಸಿಬಿಐ ತನ್ನ ವಶಪಡೆದು ಜೈಲಿಗೆ ಕಳುಹಿಸಿದೆ.