Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ₹16.5 ಲಕ್ಷ ಲಂಚ; ಬೆಸ್ಕಾಂ ಎಇಇ, ಜೆಇ ಬಂಧನ
ಕರ್ನಾಟಕಪ್ರಮುಖ

₹16.5 ಲಕ್ಷ ಲಂಚ; ಬೆಸ್ಕಾಂ ಎಇಇ, ಜೆಇ ಬಂಧನ

Share
1 Min Read
SHARE

newsics.com

ಬೆಂಗಳೂರು: ವಿದ್ಯುತ್ ಸಂಪರ್ಕ ನೀಡಲು 16.50 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಬೆಸ್ಕಾಂ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನೂತನ ವಸತಿ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ₹16 ಲಕ್ಷ ಲಂಚ ಪಡೆಯುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿ ಬೆಸ್ಕಾಂ ಕಚೇರಿಯ ಎಇಇ ಮತ್ತು ಜೆಇಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೆ.ಆ‌ರ್.ಪುರದ ಆವಲಹಳ್ಳಿ ವ್ಯಾಪ್ತಿಯ ಬೊಮ್ಮನಹಳ್ಳಿಯ ಮುತ್ತುಸ್ವಾಮಿ ಅವರು ತಮ್ಮ ಜಮೀನಿನಲ್ಲಿ ವಸತಿ ಬಡಾವಣೆ ನಿರ್ಮಿಸಿದ್ದರು. ಬಡಾವಣೆಯ ವಿದ್ಯುತ್ ಸಂಪರ್ಕ ಮತ್ತಿತರ ಕೆಲಸಗಳನ್ನು ಶ್ರೀ ಚಕ್ರ ಎಲೆಕ್ಟಿಕಲ್ಸ್ ಎಂಬ ಸಂಸ್ಥೆಗೆ ಗುತ್ತಿಗೆ ನೀಡಿದ್ದರು.

ಸಂಸ್ಥೆಯ ವ್ಯವಸ್ಥಾಪಕ ವಿಜಯ್ ಕುಮಾರ್, ವಿದ್ಯುತ್‌ ಸಂಪರ್ಕ ಸಂಬಂಧ ಕೆಲಸಗಳಿಗಾಗಿ ಬೆಸ್ಕಾಂನ ಆವಲಹಳ್ಳಿ ಕಚೇರಿಯ ಎಇಇ ರಮೇಶ್ ಬಾಬು ಅವರನ್ನು ಸೆಪ್ಟೆಂಬರ್ 25ರಂದು ಭೇಟಿ ಮಾಡಿದ್ದರು. ಎಲ್ಲ ಕೆಲಸಗಳಿಗೆ ಎಷ್ಟು ಶುಲ್ಕವಾಗುತ್ತದೆ ಎಂದು ಕೇಳಿದ್ದರು. ಆಗ ರಮೇಶ್ ಬಾಬು, ‘ಜೆಇ ನಾಗೇಶ್ ಅವರನ್ನು ಭೇಟಿ ಮಾಡಿ, ಅವರು ಮಾಹಿತಿ ನೀಡುತ್ತಾರೆ. ಅಲ್ಲಿಯವರೆಗೆ ನಿಮ್ಮ ಕಡತ ಹಾಗೇ ಇರುತ್ತದೆ’ ಎಂದು ತಿಳಿಸಿದ್ದರು.

ಅದರಂತೆ ರಮೇಶ್ ಬಾಬು ಅವರು ನಾಗೇಶ್ ಅವರನ್ನು ಭೇಟಿ ಮಾಡಿದಾಗ, ₹16.50 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವಿಜಯ್‌ಕುಮಾ‌ರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಪ್ರಕಾರ ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್‌ ಠಾಣೆಯಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ರಮೇಶ್ ಅವರ ತಂಡವು ದಾಳಿ ನಡೆಸಿ ನಾಗೇಶ್ ಮತ್ತು ರಮೇಶ್ ಅವರನ್ನು ಬಂಧಿಸಿತು.

TAGGED:16.5 lakh Rs. Two BESCOM officials who were accepting bribes were caught in Lokayukta's trap
Share This Article
Facebook Twitter Copy Link Print
Previous Article ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌
Next Article ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?