newsics.com
ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು, NDA ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು.
ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.