newsics.com
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿಯಾದರು.
ಕಾರ್ಯಕ್ರಮದ ನಿಮಿತ್ತ ಉಪರಾಷ್ಟ್ರಪತಿ ಬೆಂಗಳೂರಿಗೆ ಆಗಮಿಸಿದ್ದು, ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಹಾಗೂ ಅವರ ಪತ್ನಿ ಸುದೇಶ್ ಧನಕರ್ ಅವರಿಗೆ ಹೂಗುಚ್ಛ ನೀಡಿ ಮಾಜಿ ಪ್ರಧಾನಿ ದೇವೇಗೌಡರು ಸ್ವಾಗತ ಕೋರಿದರು. ಪರಸ್ಪರರು ಕುಶಲೋಪರಿ ವಿಚಾರಿಸಿಕೊಂಡರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಹಾಜರಿದ್ದರು