newsics.com
ತಮಿಳುನಾಡು : ವಾಲಿಬಾಲ್ ಕೋಚ್ನ ವಾಚ್ ಕದ್ದ ಆರೋಪದ ಮೇಲೆ ವಾಲಿಬಾಲ್ ತರಬೇತುದಾರನೊಬ್ಬ ವಿದ್ಯಾರ್ಥಿನಿಯ ಮೇಲೆ ಸಾರ್ವಜನಿಕವಾಗಿಯೇ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ಹೊಸೂರು ಬಳಿ ನಡೆದಿದೆ.
ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿದ್ದು, ಸಂಚಲನ ಮೂಡಿಸಿದೆ.
ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಸರ್ಕಾರಿ ಅನುದಾನಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಅಕ್ಟೋಬರ್ 23ರಂದು ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬಳು ಶಿಕ್ಷಕರ ವಾಚ್ ಕದ್ದ ಆರೋಪ ಎದುರಿಸಿದ್ದಳು.