newsics.com
ಕಾಸರಗೋಡು: ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.