newsics.com
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಕೊನೆಗೂ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಮಧ್ಯಂತರವೆಂದರೆ ತಾತ್ಕಾಲಿಕ ಜಾಮೀನು ಆಗಿದ್ದು, ಕೋರ್ಟ್ ಆದೇಶದಂತೆ ಆರೋಪಿಯು ನಿರ್ದಿಷ್ಟ ಅವಧಿಯವರೆಗೆ ಈ ಜಾಮೀನು ನೀಡಿದೆ. ಅದರಂತೆಯೇ ದರ್ಶನ್ ವಿಚಾರದಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ.
ನ್ಯಾ. ವಿಶ್ವಜಿತ್ ಶೆಟ್ಟಿಯವರು ದರ್ಶನ್ ಆರೋಗ್ಯ ವರದಿಯನ್ನು ಪರಿಶೀಲಿಸಿ ಮೆಡಿಕಲ್ ಬೇಲ್ ಮಂಜೂರು ಮಾಡಿದ್ದಾರೆ. ಇನ್ನು ದರ್ಶನ್ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಆಡ್ಮಿಟ್ ಆಗಿ ಒಂದು ವಾರದಲ್ಲಿ ವರದಿ ನೀಡಬೇಕು. ಯಾವ ಚಿಕಿತ್ಸೆ ಆಗಿದೆ ಅಂತಾ ರಿಪೋರ್ಟ್ ನೀಡಬೇಕು. ಯಾವ ಚಿಕಿತ್ಸೆ, ಏನ್ ಅವಶ್ಯಕತೆ ಇದೆ ಹಾಗೂ ಎಲ್ಲಾ ಡಿಟೇಲ್ಸ್ ನೀಡಬೇಕು. ಇದಲ್ಲದೆ ಚಿಕಿತ್ಸೆಗೂ ಮುನ್ನ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಗೆ ನೀಡಬೇಕು.