newsics.com
ರಾಮನಗರ: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್(ರಾಜ್ಯಪಾಲ) ಆಳ್ವಿಕೆ ಜಾರಿಯಾಗಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಾವು 3 ಕ್ಷೇತ್ರ ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು. ರಾಜ್ಯದಲ್ಲಿ ಮುಂದೆ ಏನು ಆಗುತ್ತದೆ ಅನ್ನೋದು ದೇವರ ಇಚ್ಛೆ ಎಂದು ಹೇಳಿದರು.
ಯಡಿಯೂರಪ್ಪ ಹಬ್ಬ ಮುಗಿದ ಮೇಲೆ ಪ್ರಚಾರಕ್ಕೆ ಬರಲಿದ್ದಾರೆ. ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಸಿದರು.