newsics.com
ಬೆಂಗಳೂರು: ಕಳೆದೊಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಆಗುತ್ತಲೇ ಇದೆ. ನಿನ್ನೆ ಕೂಡ ನಗರದ ಹಲವೆಡೆ ದಿಢೀರ್ ಮಳೆಯಾಗಿದೆ.
ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಆದರೆ, ದಿಢೀರ್ ಬಿಸಿಲು ಮಾಯವಾಗಿ ಏಕಾಏಕಿ ಮಳೆ ಸುರಿದಿದೆ. ಕಳೆದ 24 ಗಂಟೆಯಲ್ಲಿ ಇಡೀ ರಾಜ್ಯಾದ್ಯಂತ ಹಗುರ ಮಳೆಯಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬಿದ್ದಿದೆ. ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲೂ ಮಳೆ ಇತ್ತು.
ಬಂಗಾಳ ಕೊಲ್ಲಿಯಲ್ಲಿ ಸರ್ಕ್ಯುಲೇಷನ್ ಇದೆ. ಇದರ ಪರಿಣಾಮ ಇಡೀ ರಾಜ್ಯಾದ್ಯಂತ ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಾಧಾರಣ ಮಳೆಯಾಗಲಿದೆ. ಉತ್ತರ ಉಳನಾಡಿನಲ್ಲೂ ಹಗುರ ಮಳೆ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ನಗರ, ಹಾಸನ, ಮಂಡ್ಯ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಮಳೆ ಆಗಲಿದೆ.