newsics.com
ಬೆಂಗಳೂರು: ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ಪೂರ್ಣಗೊಂಡಿದ್ದು. ಈ ನಡುವೆ ರಾಜ್ಯದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ.
ಇದನ್ನು ಸ್ಮರಣೀಯ ಕಾರ್ಯಕ್ರಮವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಇದರಂತೆ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಕನ್ನಡದ ಮೊದಲ ಶಿಲಾ ಶಾಸನ ‘ಹಲ್ಮಿಡಿ ಶಾಸನ’ದ ಕಲ್ಲಿನ ಪ್ರತಿಕೃತಿ ರಚಿಸಿ, ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಷ್ಠಾಪಿಸಲು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಈ ಪ್ರತಿಕೃತಿಗಳನ್ನು ರಚಿಸುವ ಜವಾಬ್ದಾರಿಯನ್ನು ನಗರದ ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯಕ್ಕೆ ನೀಡಲಾಗಿದ್ದು, ಜಿಲ್ಲಾಡಳಿತದ ವತಿಯಿಂದ ಶಿಲಾಶಾಸನವನ್ನು ಪ್ರತಿಷ್ಠಾಪನೆ ಮಾಡಿ ನ. 1 ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನಾವರಣ ಮಾಡಿಸಲು ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.