newsics.com
ಬೆಂಗಳೂರು : ಪಟಾಕಿ ಹಚ್ಚಲು ಹೋಗಿ ಮಕ್ಕಳು ಸೇರಿದಂತೆ 29 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಸಾಲು ಸಾಲು ಪಟಾಕಿ ಅವಘಡಗಳು ಸಂಭವಿಸಿದ್ದು, ಗಾಯಗೊಂಡವರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ. ಕಣ್ಣು ಸೇರಿ ದೇಹದ ಹಲವು ಭಾಗಗಳಿಗೆ ಸುಟ್ಟಿದ್ದು, ಗಾಯಗೊಂಡವರಿಗೆ ಮಿಂಟೋ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಪಟಾಕಿ ಅವಘಡದಿಂದ ಮಿಂಟೋ ಆಸ್ಪತ್ರೆಯಲ್ಲಿ 14 ಕೇಸ್ ದಾಖಲಾಗಿದೆ. ಐವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು 9 ಮಂದಿ ಔಟ್ ಪೇಷೆಂಟ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿದು ಈವರೆಗೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಸಿಡಿಸುವಾಗ ಹಾಗೂ ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ಹಲವರ ಕಣ್ಣಿಗೆ ಗಾಯಗಳಾಗಿವೆ ಎನ್ನಲಾಗಿದೆ.