newsics.com
ವಿಜಯಪುರ : ರಾಜ್ಯಾದ್ಯಂತ ವಕ್ಫ್ ವಿವಾದ ಭುಗಿಲೆದ್ದಿದ್ದು, ನಾಳೆ ಕೋಲಾರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಇತ್ತ ವಿಜಯಪುರದಲ್ಲಿ ನಾಳೆಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಆರಂಭಿಸಲಿದ್ದಾರೆ.
ಹೌದು ವಕ್ಫ್ ಆಸ್ತಿ ವಿವಾದ ಸಂಬಂಧ ನಾಳೆಯಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಅಹೋರಾತ್ರಿ ಧರಣಿಯ ಬಗ್ಗೆ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ರೈತರು, ಸಂಘ ಸಂಸ್ಥೆಗಳು, ಶಾಲೆಗಳು, ಮಠಮಾನ್ಯಗಳ ಜಮೀನು ಹಾಗೂ ಸರ್ಕಾರಿ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ. ವಕ್ಫ್ ಆಸ್ತಿ ಎಂದು ನಮೂದಿಸಿದ್ದನ್ನು ತೆಗೆಯುವಂತೆ ಒತ್ತಾಯ ಕೇಳಿ ಬಂದಿದ್ದು, ನಾಳೆಯಿಂದ ಹೋರಾಟ ನಡೆಸುವುದಾಗಿ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.