newsics.com
ಬೆಂಗಳೂರು: ರಾಜ್ಯಾದ್ಯಂತ ವಕ್ಫ್ ಅವಾಂತರ ಹೆಚ್ಚುತ್ತಲೇ ಸಾಗಿದೆ. ವಿಶ್ವಿಖ್ಯಾತ ಗೋಲಗುಮ್ಮಟ, ಬಾರಾ ಕಮಾನ್ ಸೇರಿ ರಾಜ್ಯದ 53 ಐತಿಹಾಸಿಕ ಸ್ಮಾರಕಗಳು ತನ್ನದೆಂದು ಹೇಳಿಕೊಂಡಿರುವ ವಕ್ಫ್ ಬೋರ್ಡ್, ಇವುಗಳಿಗೆ ನೋಟಿಸ್ ಜಾರಿ ಮಾಡಿದೆ. ಇದರಲ್ಲಿ ವಿಜಯಪುರ ಜಿಲ್ಲೆಯ 43 ಸ್ಮಾರಕಗಳು ಸೇರಿವೆ.
ಅಷ್ಟೇ ಅಲ್ಲ, ಬೀದರ್ ತಾಲೂಕಿನ ಧರ್ಮಾಪುರದಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸುಪರ್ದಿಗೆ ಹೋದಂತೆ ಇತ್ತೀಚೆಗೆ ತೆಗೆಯಲಾದ ಪಹಣಿಗಳಿಂದ ಗೊತ್ತಾಗಿದ್ದು, ಗ್ರಾಮದ 2000 ಮಂದಿ ಆತಂಕಕ್ಕೀಡಾಗಿದ್ದಾರೆ.
ಧರ್ಮಾಪುರ ಗ್ರಾಮದ ಸರ್ಕಾರಿ ಜಮೀನಿನ ಸರ್ವೆ ನಂಬರ್ 87ರ ಒಟ್ಟು 26 ಎಕರೆ ಜಾಗಕ್ಕೆ ವಕ್ಫ್ ಹೆಸರು ಸೇರ್ಪಡೆಯಾಗಿದ್ದು, ಗ್ರಾಮದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೇಳಲು ಕಾರಣವಾಗಿದೆ.
ಧರ್ಮಾಪುರ ಗ್ರಾಮದಲ್ಲಿ ನೂರಾರು ಮನೆಗಳಿದ್ದು, 2001ರಲ್ಲಿ ವಕ್ಫ್ ಉಲ್ಲೇಖವಿಲ್ಲದ ಪಹಣಿ ಇತ್ತು. ಆದರೆ, 2013ರ ನಂತರ ವಕ್ಫ್ ಹೆಸರು ಉಲ್ಲೇಖವಾಗಿದೆ. ಮನೆ ಕಟ್ಟಲಾಗಿರುತ್ತದೆ ಎಂದು 2001, 2013ರ ಪಹಣಿಗಳಲ್ಲಿ ಉಲ್ಲೇಖವಾಗಿತ್ತು.
2024ರ ಪಹಣಿಯಲ್ಲಿ ಮನೆಗಳ ಮಾಹಿತಿಯನ್ನೂ ನೀಡದೇ ವಕ್ಫ್ ಆಸ್ತಿ ಎಂದು ಉಲ್ಲೇಖಿಸಿ ಪರಭಾರೆ ನಿಷೇಧಿಸಿದೆ ಎಂಬ ಪದಬಳಕೆ ಮಾಡಿದ್ದು ಗ್ರಾಮಸ್ಥರನ್ನು ದಂಗಾಗಿಸಿದೆ.
ಸರ್ವೆ ನಂಬರ್ 87ರಲ್ಲಿ ಬರುವ ಮನೆ, ಸರ್ಕಾರಿ ಶಾಲೆ, ದೇವಸ್ಥಾನ, ಅಂಗನವಾಡಿಗಳ ಪಹಣಿಯಲ್ಲೂ ವಕ್ಫ ಬೋರ್ಡ್ ಹೆಸರು ನಮೂದಾಗಿದ್ದರಿಂದ ಬೀದರ್ ಜಿಲ್ಲೆಯ ಧರ್ಮಾಪುರ ಗ್ರಾಮದ 200 ಕುಟುಂಬಗಳ 2 ಸಾವಿರಕ್ಕೂ ಹೆಚ್ಚು ಜನರು ತಮ್ಮ ಬದುಕು ಬೀದಿಗೆ ಬರಲಿದೆ ಎಂದು ಆತಂಕ್ಕೀಡಾಗಿದ್ದಾರೆ.
ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!
…ಇಷ್ಟೆಲ್ಲ ಇದ್ದರೂ ಗುರುಪ್ರಸಾದ್ ಸಾವಿಗೆ ಶರಣಾಗಿದ್ದೇಕೆ? ಸದಾ ಕಾಡುವ ಉತ್ತರ ಸಿಗದ ಹತ್ತಾರು ಪ್ರಶ್ನೆಗಳು…