newsics.com
ರಾಮನಗರ: ಚನ್ನಪಟ್ಟಣ ಅಖಾಡ ರಂಗೇರಿದೆ. ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ತಮ್ಮ ಪತ್ನಿಯಲ್ಲಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ರೇವತಿ ಪ್ರಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳು, ಮಹಿಳೆಯರು ಕೂಡ ಸಾಥ್ ನೀಡಿದರು.
ಇಂದು ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಎಚ್ಡಿ ದೇವೇಗೌಡರು ಕೂಡ ಪ್ರಚಾರ ಮಾಡಲಿದ್ದು ಚುನಾವಣಾ ಅಖಾಡ ಮತ್ತಷ್ಟು ರಂಗೇರಲಿದೆ. ಅಲ್ಲದೇ ಇಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಕೂಡ ಪ್ರಚಾರ ಮಾಡಲಿದ್ದಾರೆ.
ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಅವರ ಧರ್ಮಪತ್ನಿ ಶ್ರೀಮತಿ ರೇವತಿ ಕುಮಾರಸ್ವಾಮಿ ಅವರು ಪಟ್ಟಣದಲ್ಲಿ ಪ್ರಚಾರ ನಡೆಸಿದರು. ಪಟ್ಟಣದ ಬಸ್ ನಿಲ್ದಾಣ ಹಾಗೂ ಪದವಿ ಕಾಲೇಜಿನ ಸಮೀಪ ಅವರು ನಿಖಿಲ್ ಅವರ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು, ಪಟ್ಟಣದ ಸಾರ್ವಜನಿಕರನ್ನು ಭೇಟಿಯಾದ ರೇವತಿ ಅವರು, ಕರಪತ್ರಗಳನ್ನು ನೀಡಿ ಎನ್ ಡಿಎ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.