newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಲಾಕ್ ಆಗಿದ್ದ ನಟ ದರ್ಶನ್ ಈಗ ಆಸ್ಪತ್ರೆ ಪಾಲಾಗಿದ್ದಾರೆ. ಬೆನ್ನು ನೋವು ಅಂತಾ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದರ್ಶನ್ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಲು ವೈದ್ಯರು ಸಾಲುಸಾಲು ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ. ನಿನ್ನೆಯಿಂದಲೂ ಅನೇಕ ಸ್ಕ್ಯಾನಿಂಗ್, ಟೆಸ್ಟ್ ನಡೆಸುತ್ತಿದ್ದು ಅದರ ರಿಪೋರ್ಟ್ಗಳು ಕೂಡ ಒಂದೊಂದಾಗಿ ವೈದ್ಯರ ಕೈ ಸೇರ್ತಿವೆ.
2013ರ ಸಮಯದಲ್ಲಿ ಬೃಂದಾವನ ಸಿನಿಮಾ ಶೂಟಿಂಗ್ ನಡೆಯುವ ಸಮಯದಲ್ಲಿ ನಟ ದರ್ಶನ್ ತೂಗುದೀಪ್ ಕುದುರೆ ಮೇಲಿಂದ ಬಿದ್ದಿದ್ದರು. ಸುಮಾರು 11 ವರ್ಷ ಹಿಂದೆ ಬಿದ್ದು ನೋವು ಮಾಡಿಕೊಂಡಿದ್ದರು. ಅದೇ ನೋವು ಈಗ ಕಾಡುತ್ತಿದ್ದು, ಇದೇ ಕಾರಣಕ್ಕೆ ಆಸ್ಪತ್ರೆ ಸೇರುವ ಪರಿಸ್ಥಿತಿ ಬಂದಿದೆ ಎನ್ನಲಾಗಿದೆ.
ಬಳ್ಳಾರಿ ಜೈಲಿಂದ ದರ್ಶನ್ ತೂಗುದೀಪ್ ಅವರನ್ನ ರಿಲೀಸ್ ಮಾಡುವಾಗ ಮಾನ್ಯ ಹೈಕೋರ್ಟ್ ಹಲವು ಷರತ್ತು ವಿಧಿಸಿದೆ. ಅದರಲ್ಲೂ ಪ್ರಮುಖವಾಗಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ, ಸಾಕ್ಷಿಗಳಿಗೆ ಯಾವುದೇ ರೀತಿ ಬೆದರಿಕೆ ಹಾಕದಂತೆ ಖಡಕ್ ವಾರ್ನಿಂಗ್ ಕೂಡ ಕೊಡಲಾಗಿದೆ. ಈಗ ಇದೇ ಆದೇಶದ ಹಿನ್ನೆಲೆ ದರ್ಶನ್ ತೂಗುದೀಪ್ ಅವರ ಮೇಲೆ ಪೊಲೀಸ್ ಪಡೆಯಿಂದ ಹದ್ದಿನ ಕಣ್ಣು ಇಡಲಾಗಿದೆ.