newsics.com
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಪಡೆದು ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ದರ್ಶನ್ ಸದ್ಯ ಆಪರೇಷನ್ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ಮತ್ತು ಕಾಲುನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಆದರೆ ದರ್ಶನ್ ಆಪರೇಷನ್ಗೆ ಹಿಂದೇಟು ಹಾಕುತ್ತಿದ್ದು, ಮುಂದಿನ 10 ದಿನಗಳ ಕಾಲ ಪಾರಂಪರಿಕ ಚಿಕಿತ್ಸೆ ಕೊಡಲು ನಿರ್ಧರಿಸಲಾಗಿದೆ.
ನಟ ದರ್ಶನ್ಗೆ ಈಗಾಗಲೇ ಪಾರಂಪರಿಕ ಶೈಲಿಯ ಚಿಕಿತ್ಸೆ ನೀಡಲಾಗ್ತಿದ್ದು ಜತೆಗೆ ಔಷಧಿ ಮತ್ತು ಮಾತ್ರೆಗಳನ್ನ ನೀಡಿ ಗುಣಮುಖ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ದರ್ಶನ್ಗೆ ಬೆನ್ನು ನೋವು ಮತ್ತು ಕಾಲು ನೋವು ಇನ್ನೂ ಕಡಿಮೆ ಆಗುತ್ತಿಲ್ಲ. ಹೀಗಾಗಿ ಮುಂದಿನ 10 ದಿನಗಳ ಕಾಲ ಕೂಡ ಇದೇ ಮಾದರಿಯಲ್ಲಿ ಚಿಕಿತ್ಸೆ ಕೊಡಲು ವೈದ್ಯರು ಮುಂದಾಗಿದ್ದಾರೆ.
ಸಾಂಪ್ರದಾಯಿಕ ಪದ್ಧತಿ ಚಿಕಿತ್ಸೆಯಲ್ಲಿ ಹುಷಾರಾಗದಿದ್ದರೆ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಒಪ್ಪದಿದ್ದರೆ ಹೆಚ್ಚಿನ ಚಿಕಿತ್ಸೆ ಅಥವಾ ನುರಿತ ವೈದ್ಯರಿಂದ ಚಿಕಿತ್ಸೆ ಪಡೆಯಲು ಆಸ್ಪತ್ರೆ ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.