newsics.com
ಕೇರಳ: ವಿದ್ಯಾರ್ಥಿಗೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.
ಶಿಕ್ಷಕನನ್ನು ಮಲಪ್ಪುರಂ ಜಿಲ್ಲೆಯ ತಾನೂರ್ ಮೂಲದ ಉಮೈರ್ ಅಶ್ರಫಿ ಎಂದು ಗುರುತಿಸಲಾಗಿದೆ. ಮದರಸಾ ಶಿಕ್ಷಕನು ಬಾಲಕನ ಖಾಸಗಿ ಭಾಗಗಳಿಗೆ ಮೆಣಸಿನ ಪುಡಿ ಹಚ್ಚಿದ್ದು, ಐರನ್ ಬಾಕ್ಸ್ ನಿಂದ ಬರೆ ಎಳೆದಿದ್ದಾನೆ.
ಇನ್ನು ವಿದ್ಯಾರ್ಥಿಯು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಅಶ್ರಫಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.