newsics.com
ಮಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ತನ್ನ ಪತಿಗೆ ಸ್ಕೂಟರ್ ಕೊಡಿಸಿರುವ ಘಟನೆ ಮಂಗಳೂರಿನ ಪುತ್ತೂರಿನಲ್ಲಿ ನಡೆದಿದ.
ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿಸಿದ್ದಾರೆ. ವೃತ್ತಿಯಲ್ಲಿ ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಅನುಕೂಲ ಕಲ್ಪಿಸಿದೆ.
ತನ್ನ ಸ್ಕೂಟರ್ ನಲ್ಲಿ ಸಲೀಂ ‘ಆರ್ಥಿಕ ನೆರವು ಗೃಹಲಕ್ಷ್ಮಿ’ ಎಂಬ ಭಿತ್ತಿಪತ್ರ ಅಂಟಿಸಿದ್ದು, ಅದರಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮರ್, ಲಕ್ಣ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿದ್ದಾರೆ.