newsics.com
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದರು. ಈ ಸಂಬಂಧ ಹೈಕೋರ್ಟ್ ಆದೇಶವನ್ನು ರಾಜಕೀಯಪ್ರೇರಿತ ಎಂದಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.
ಈ ಮೂಲಕ ಸಚಿವ ಜಮೀರ್ ಅಹ್ಮದ್ಗೆ ಬಿಗ್ ಶಾಕ್ ನೀಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಟಿ.ಜೆ ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದು ಆಕ್ಷೇಪಾರ್ಹವಾಗಿದೆ ಎಂಬುದಾಗಿ ತಿಳಿಸಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಸಚಿವ ಜಮೀರ್ ಅಹ್ಮದ್ಗೆ ಸಂಕಷ್ಟ ಎದುರಾಗಿದೆ.
ಬೆಂಗಳೂರಲ್ಲಿ ದಟ್ಟ ಮಂಜು: 15 ವಿಮಾನ ಹಾರಾಟ ವಿಳಂಬ, 6 ಫ್ಲೈಟ್ ಮಾರ್ಗ ಬದಲು
ಪಡ್ಡೆ ಹುಡುಗರ ನಿದ್ದೆ ಕದ್ದ ಸಾರಾ ಅಣ್ಣಯ್ಯ; ಸಾರಾ ಲುಕ್ ಗೆ ಫ್ಯಾನ್ಸ್ ಫಿದಾ