newsics.com
ಮಂಗಳೂರು: ಮನೆ ಕಳೆದುಕೊಂಡಿರುವ ವೃದ್ದ ದಂಪತಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿರುವ ಘಟನೆ ಮಂಗಳೂರಿನ ಕೌಕ್ರಾಡಿಯಲ್ಲಿ ನಡೆದಿದೆ.
ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು ಏಕಾಏಕಿ ಧ್ವಂಸಗೊಳಿಸಲಾಗಿದೆ. ಇದರಿಂದ ಕಂಗಾಲ ಆಗಿರುವ ದಂಪತಿ ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.
ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹುಟ್ಟಿಯವರು. ದಂಪತಿ ಕೂಲಿ ಕೆಲಸ ನಿಮಿತ್ಯ ಕಡಬ ತಾಲೂಕು, ಉಪ್ಪಿನಂಗಡಿ ಹೋಬಳಿ, ಕೌಕ್ರಾಡಿ ಗ್ರಾಮಕ್ಕೆ ಆಗಮಿಸಿವಾಗಿದ್ದಾರೆ. ಕೌಕ್ರಾಡಿ ಗ್ರಾಮದ ಕಾವಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1 ರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ.
ದಂಪತಿಗೆ ಯಾವುದೇ ಪಿತ್ರಾರ್ಜಿತವಾಗಿ ಆಸ್ತಿಯೂ ಇರುವುದಿಲ್ಲ. ಆದ್ದರಿಂದ ಸರ್ಕಾರಿ ಜಾಗ 123/1 ರಲ್ಲಿನ ಕಾಪಿನಬಾಗಿಲು ಎಂಬಲ್ಲಿ ವಾಸವಾಗಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರಕರಣ ತಣ್ಣಗಾಗಿತ್ತು. ಆದರೆ, ಇದೀಗ ಅಧಿಕಾರಿಗಳು ಮನೆಯ ವಸ್ತುಗಳನ್ನ ಹೊರಗೆಸೆದು ಏಕಾಏಕಿ ಮನೆ ದ್ವಂಸ ಮಾಡಿದ್ದಾರೆ. ವೃದ್ಧ ದಂಪತಿ ಕಣ್ಣೀರು ಹಾಕಿದರೂ ಅಧಿಕಾರಿಗಳು ಮನೆ ತೆರವುಗೊಳಿಸಿದ್ದಾರೆ.
ಹೀಗಾಗಿ, ವೃದ್ಧ ದಂಪತಿ “ಒಂದು ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಅಥವಾ ಅದಕ್ಕೆ ಸಾಧ್ಯವಿಲ್ಲ ಎಂಬುದಾದರೆ ದಯಮಾಡಿ ವೃದ್ಧರಾದ ನಮಗೆ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.