newsics.com
ಬೆಂಗಳೂರು: ಬೇಲೆಕೇರಿ ಬಂದರನಿಂದ ಅಕ್ರಮವಾಗಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ 7 ವರ್ಷ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಅಲ್ಲದೆ, ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿರುವ ಹೈಕೋರ್ಟ್, 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ. ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಶಿಕ್ಷೆ ರದ್ದು ಪಡಿಸುವಂತೆ ಸೈಲ್ , ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಹೈಕೋರ್ಟ್ ಸಿಬಿಐಗೆ ನೋಟಿಸ್ ಕೂಡ ಜಾರಿ ಮಾಡಿತ್ತು. ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿ, ಶಿಕ್ಷೆಯ ಪ್ರಮಾಣವನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಅಲ್ಲದೇ 6 ವಾರಗಳಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡೋದಕ್ಕೆ ಸೂಚಿಸಿದೆ.
ಹೈಕೋರ್ಟ್ ನ ಈ ಆದೇಶಸಿಂದ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಅಲ್ಲದೇ ಜೈಲುಪಾಲಾಗಿರುವಂತ ಆರೋಪಿಗಳು ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.