newsics.com
ಬೆಂಗಳೂರು: ಮಾಜಿ ಸಿಎಂ ದಿವಂಗತ ಎಸ್.ನಿಜಲಿಂಗಪ್ಪ ಅವರ ಮನೆ ಮಾರಾಟಕ್ಕಿಟ್ಟಿರುವಂತ ಸುದ್ದಿ ವೈರಲ್ ಆಗಿತ್ತು. ಈಗ ಆ ಮನೆಯನ್ನು ರಾಜ್ಯ ಸರ್ಕಾರವೇ ಖರೀದಿಸಲು ನಿರ್ಧರಿಸಿದೆ. ಹೌದು, ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.
ರಾಜ್ಯ ಸರ್ಕಾರದಿಂದ ಇದಕ್ಕಾಗಿ 2020-21ನೇ ಸಾಲಿನ ಬಜೆಟ್ ನಲ್ಲಿ ಮಾಜಿ ಸಿಎಂ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು 5 ಕೋಟಿ ಅನುದಾನ ಘೋಷಿಸಿತ್ತು. ಅದರಂತೆ 5 ಕೋಟಿ ರೂಪಾಯಿಯನ್ನು ನೀಡಿ ಎಸ್.ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಚಿತ್ರದುರ್ಗದಲ್ಲಿರುವಂತ ಮಾಜಿ ಸಿಎಂ ದಿವಂಗತ ಎಸ್.ನಿಜಲಿಂಗಪ್ಪ ಅವರ ನಿವಾಸವನ್ನು ಮಾರಾಟಕ್ಕೆ ಇಟ್ಟಂತ ವಿಚಾರ ವೈರಲ್ ಆಗಿತ್ತು. ಅಲ್ಲದೇ ಸ್ಮಾರಕವಾಗಿ ಮಾಡಬೇಕಿದ್ದಂತ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಸಾರ್ವಜನಿಕರು ಆಕ್ರೋಶದ ಮೂಲಕ ಹೊರ ಹಾಕಿದ್ರು. ಈ ಬೆನ್ನಲ್ಲೇ 5 ಕೋಟಿಯಲ್ಲಿ ಎಸ್.ನಿಜಲಿಂಗಪ್ಪ ಮನೆಯನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.